ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.
87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…