ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.
87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…