ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್: ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ

ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.

ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ‌ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್‌ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.

ದೊಡ್ಡಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 91/1, 80/3, 92, 98/1, 98/2, 98/4, 93, 8/3, 76, 81/1,

87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 hour ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

15 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago