ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್: ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ

ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.

ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ‌ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್‌ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.

ದೊಡ್ಡಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 91/1, 80/3, 92, 98/1, 98/2, 98/4, 93, 8/3, 76, 81/1,

87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago