ಫಾರ್ಮಾ ಕಂಪನಿಯಲ್ಲಿ ಅಗ್ನಿ‌‌ ಅವಘಡ: ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಬಾಲಕ: ಬಾಲಕನಿಗೆ ಅಭಿನಂದನೆ ಸಲ್ಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಸಾಯಿಚರಣ್ ಅವರನ್ನು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಾಯಿ ಚರಣ್ ತನ್ನ ಪೋಷಕರೊಂದಿಗೆ ಸಿಎಂ ಅವರನ್ನು ಭೇಟಿಯಾದರು. ಕಾರ್ಮಿಕರ ರಕ್ಷಣೆಯಲ್ಲಿ ತೋರಿದ ಪ್ರಯತ್ನದ ವಿವರಗಳನ್ನು ಮುಖ್ಯಮಂತ್ರಿಗಳು ಕೇಳಿದರು.  ಬಾಲಕನ ಸಾಹಸಕ್ಕೆ ಮೆಚ್ಚಿದ ಸಿಎಂ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ತಿಂಗಳ 26ರಂದು ಹೈದರಾಬಾದ್‌ನ ಉಪನಗರದಲ್ಲಿರುವ ಉದ್ಯಮವೊಂದರಲ್ಲಿ ಸಂಭವಿಸಿದ ಬೆಂಕಿಯಿಂದ ಸಾಯಿಚರಣ್ ಆರು ಮಂದಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಹತ್ತನೇ ತರಗತಿ ಮುಗಿಸಿದ 15 ವರ್ಷದ ಬಾಲಕ. ಸಾಯಿಚರಣ್ ಅವರು ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ ಕ್ಷೇತ್ರದ ನಂದಿಗಮದಿಂದ ಬಂದವರು. ಸಾಯಿಚರಣ್ ಅವರ ಸಾಹಸಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!