ಫಾರ್ಮಾ ಕಂಪನಿಯಲ್ಲಿ ಅಗ್ನಿ‌‌ ಅವಘಡ: ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಬಾಲಕ: ಬಾಲಕನಿಗೆ ಅಭಿನಂದನೆ ಸಲ್ಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಸಾಯಿಚರಣ್ ಅವರನ್ನು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಾಯಿ ಚರಣ್ ತನ್ನ ಪೋಷಕರೊಂದಿಗೆ ಸಿಎಂ ಅವರನ್ನು ಭೇಟಿಯಾದರು. ಕಾರ್ಮಿಕರ ರಕ್ಷಣೆಯಲ್ಲಿ ತೋರಿದ ಪ್ರಯತ್ನದ ವಿವರಗಳನ್ನು ಮುಖ್ಯಮಂತ್ರಿಗಳು ಕೇಳಿದರು.  ಬಾಲಕನ ಸಾಹಸಕ್ಕೆ ಮೆಚ್ಚಿದ ಸಿಎಂ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ತಿಂಗಳ 26ರಂದು ಹೈದರಾಬಾದ್‌ನ ಉಪನಗರದಲ್ಲಿರುವ ಉದ್ಯಮವೊಂದರಲ್ಲಿ ಸಂಭವಿಸಿದ ಬೆಂಕಿಯಿಂದ ಸಾಯಿಚರಣ್ ಆರು ಮಂದಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಹತ್ತನೇ ತರಗತಿ ಮುಗಿಸಿದ 15 ವರ್ಷದ ಬಾಲಕ. ಸಾಯಿಚರಣ್ ಅವರು ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ ಕ್ಷೇತ್ರದ ನಂದಿಗಮದಿಂದ ಬಂದವರು. ಸಾಯಿಚರಣ್ ಅವರ ಸಾಹಸಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago