PM-KUSUM Component C ಯೋಜನೆಯಡಿ ಫೀಡರ್ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.
400 ವಿದ್ಯುತ್ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್ ಪೂರೈಕೆ ಮಾಡಲು ಸಹ ಸಾಧ್ಯವಾಗಲಿದೆ ಎಂದರು.
ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಶೀಲ್ದಾರರೊಂದಿಗೆ ಜಮೀನು ಗುರುತಿಸಿ, ಕೂಡಲೇ ಸೂಕ್ತ ಪ್ರಸ್ತಾವನೆ ಕಳುಹಿಸಿ, ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್ ಆಧಾರದಲ್ಲಿ ಹಸ್ತಾಂತರಿಸಬೇಕು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರ ಮಾಡಬೇಕು ಎಂದು ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಖುದ್ದು ಸೂಚನೆ ನೀಡುತ್ತೇನೆ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುತ್ತೇನೆ ಎಂದರು.
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…