Categories: ರಾಜ್ಯ

ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3 ಸಾವಿರ ಎಕರೆ ಭೂಮಿ ಅಗತ್ಯ- ಸಿಎಂ ಸಿದ್ದರಾಮಯ್ಯ

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.

400 ವಿದ್ಯುತ್‌ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್‌ ಪೂರೈಕೆ ಮಾಡಲು ಸಹ ಸಾಧ್ಯವಾಗಲಿದೆ ಎಂದರು.

ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಶೀಲ್ದಾರರೊಂದಿಗೆ ಜಮೀನು ಗುರುತಿಸಿ, ಕೂಡಲೇ ಸೂಕ್ತ ಪ್ರಸ್ತಾವನೆ ಕಳುಹಿಸಿ, ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್‌ ಆಧಾರದಲ್ಲಿ ಹಸ್ತಾಂತರಿಸಬೇಕು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರ ಮಾಡಬೇಕು ಎಂದು ತಿಳಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಖುದ್ದು ಸೂಚನೆ ನೀಡುತ್ತೇನೆ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುತ್ತೇನೆ ಎಂದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

16 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

20 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago