PM-KUSUM Component C ಯೋಜನೆಯಡಿ ಫೀಡರ್ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.
400 ವಿದ್ಯುತ್ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್ ಪೂರೈಕೆ ಮಾಡಲು ಸಹ ಸಾಧ್ಯವಾಗಲಿದೆ ಎಂದರು.
ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಶೀಲ್ದಾರರೊಂದಿಗೆ ಜಮೀನು ಗುರುತಿಸಿ, ಕೂಡಲೇ ಸೂಕ್ತ ಪ್ರಸ್ತಾವನೆ ಕಳುಹಿಸಿ, ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್ ಆಧಾರದಲ್ಲಿ ಹಸ್ತಾಂತರಿಸಬೇಕು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರ ಮಾಡಬೇಕು ಎಂದು ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಖುದ್ದು ಸೂಚನೆ ನೀಡುತ್ತೇನೆ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುತ್ತೇನೆ ಎಂದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…