Categories: ರಾಜ್ಯ

ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3 ಸಾವಿರ ಎಕರೆ ಭೂಮಿ ಅಗತ್ಯ- ಸಿಎಂ ಸಿದ್ದರಾಮಯ್ಯ

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.

400 ವಿದ್ಯುತ್‌ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್‌ ಪೂರೈಕೆ ಮಾಡಲು ಸಹ ಸಾಧ್ಯವಾಗಲಿದೆ ಎಂದರು.

ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಶೀಲ್ದಾರರೊಂದಿಗೆ ಜಮೀನು ಗುರುತಿಸಿ, ಕೂಡಲೇ ಸೂಕ್ತ ಪ್ರಸ್ತಾವನೆ ಕಳುಹಿಸಿ, ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್‌ ಆಧಾರದಲ್ಲಿ ಹಸ್ತಾಂತರಿಸಬೇಕು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರ ಮಾಡಬೇಕು ಎಂದು ತಿಳಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಖುದ್ದು ಸೂಚನೆ ನೀಡುತ್ತೇನೆ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುತ್ತೇನೆ ಎಂದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

3 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

4 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

5 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

6 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

8 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

9 hours ago