ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನ ಏರಿಕೆ: 31 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ: ಬಿಸಿಲಿನ ಶಾಖಕ್ಕೆ ಜನ ಹೈರಾಣು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.

ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.

ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.

ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್‌ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.

ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.

ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

5 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

5 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

17 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

20 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

21 hours ago