ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನ ಏರಿಕೆ: 31 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ: ಬಿಸಿಲಿನ ಶಾಖಕ್ಕೆ ಜನ ಹೈರಾಣು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.

ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.

ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.

ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್‌ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.

ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.

ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

60 minutes ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

14 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

14 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

19 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

21 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

24 hours ago