ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.
ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.
ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.
ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.
ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.
ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…