ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.
ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.
ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.
ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.
ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.
ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…