ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನ ಏರಿಕೆ: 31 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ: ಬಿಸಿಲಿನ ಶಾಖಕ್ಕೆ ಜನ ಹೈರಾಣು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.

ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.

ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.

ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್‌ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.

ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.

ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

53 minutes ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

16 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago