ಫೆ.14ರಂದು ಸಿಆರ್‌ಪಿಎಫ್ ಗ್ರೂಪ್ ಸೆಂಟರ್ ನಲ್ಲಿ ಪುಲ್ವಾಮ ಹುತಾತ್ಮ ಯೋಧರ 5ನೇ ವರ್ಷದ ಪುಣ್ಯಸ್ಮರಣೆ

19ರ ಫೆ.14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ CRPF ಯೋಧರ 5ನೇ ವರ್ಷದ ಪುಣ್ಯಸ್ಮರಣೆಯನ್ನು ಫೆ.14 ರಂದು ಇಲ್ಲಿನ ಸಿಆರ್ಪಿಎಫ್ ಗ್ರೂಪ್ ಸೆಂಟರ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಆರ್ಪಿಎಫ್ ನಿವೃತ್ತ ಐಜಿಪಿ ಕೆ.ಅರ್ಕೇಶ್ ತಿಳಿಸಿದರು.

ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ‌ ಅರೆಸೇನಾ ಪಡೆಗಳ‌ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪುಲ್ವಾಮ ದಾಳಿಯ ಹುತಾತ್ಮ ಯೋಧರು ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲ ಯೋಧರಿಗೂ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸಿಆರ್‌ಪಿಎಫ್ ಮೈದಾನದಲ್ಲಿ ನಡೆಯುವ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು ಭಾಗವಹಿಸಲಿದ್ದಾರೆ. ಸುಮಾರು 5 ಸಾವಿರ ನಿವೃತ್ತ ಸಿಆರ್ಪಿಎಫ್ ಯೋಧರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮರಿಗೆ ನಮನ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರೀಯ ಅರೆಸೇನಾಪಡೆಗಳು ದೇಶದ ಆಂತರಿಕ ಹಾಗೂ ಬಾಹ್ಯ ಭದ್ರತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಗೃಹ ಸಚಿವಾಲಯದಡಿ ಬರುವ ಅರೆಸೇನಾ ಪಡೆಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಭಾರತೀಯ ಸೇನೆಗೆ ಸಿಗುವ ಸವಲತ್ತುಗಳು ಅರೆಸೇನಾ ಪಡೆಗಳಿಗೆ ಸಿಗುತ್ತಿಲ್ಲ. ಭಾರತೀಯ ಸೇನೆ ಯುದ್ಧದ ಸಮಯದಲ್ಲಿ ಮಾತ್ರ ಅಖಾಡಕ್ಕಿಳಿಯಲಿದೆ. ಆದರೆ, ಅರೆಸೇನೆ ಪಡೆಗಳು ನಿರಂತರ ಗಡಿ ಕಾಯುವ ಜೊತೆಗೆ ಆಂತರಿಕ ಭದ್ರತೆಯ ಜವಾಬ್ದಾರಿ ವಹಿಸಿವೆ. ಶಾಂತಿ ಸ್ಥಾಪನೆಯಲ್ಲಿ ಪ್ರಮಖ ಪಾತ್ರ ವಹಿಸಿವೆ. ಸ್ವಾತಂತ್ರ್ಯ ನಂತರದಲ್ಲಿ 35 ಸಾವಿರ ಸಿಆರ್ ಪಿಎಫ್ ಯೋಧರು ವಿವಿಧ‌ ಸಂದರ್ಭಗಳಲ್ಲಿ ದೇಶಕ್ಕಾಗಿ ಪ್ರಾಣ ತೆತ್ತಿದ್ದಾರೆ. ಆದರೆ, ದೇಶ ಅವರನ್ನು ಸ್ಮರಿಸಿಲ್ಲ.  ಹಾಗಾಗಿ ಫೆ.4 ರಂದು 5 ನೇ ವರ್ಷದ ಪುಣ್ಯ ಸ್ಮರಣೆ ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮದಲ್ಲಿ‌ ನಮ್ಮ ಕುಂದುಕೊರತೆಗಳನ್ನು ಸರ್ಕಾರದ‌ ಮುಂದಿಡಲಾಗುವುದು ಎಂದು ಹೇಳಿದರು.

ಸಿಆರ್ ಪಿಎಫ್ ನಲ್ಲಿ ರಾಜ್ಯದ 40 ಸಾವಿರಕ್ಕೂ ಹೆಚ್ಚು ಯೋಧರು ಕಾರ್ಯನಿರ್ವಹಿಸುತ್ತಿದ್ದಾರೆ. 15 ಸಾವಿರ ನಿವೃತ್ತ ಯೋಧರು ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಯಲಹಂಕದ ಸಿಆರ್ ಪಿಎಫ್ ಗ್ರೂಪ್ ಸೆಂಟರ್ ನಲ್ಲಿ ಕರ್ನಾಟಕದ 1500 ಯೋಧರು ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ರೋಹ, ನಕ್ಸಲಿಸಂ, ಕೋಮುದಳ್ಳುರಿ, ಬಂದ್, ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ದೇಶದ ಆಂತರಿಕ ಸುರಕ್ಷತೆಯಲ್ಲಿ ಸಿಆರ್ ಪಿಎಫ್ ತೊಡಗಿಸಿಕೊಂಡಿದೆ. ನಮ್ಮವರ ಸೇವೆಯನ್ನು ದೇಶಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ನಿವೃತ್ತ ಯೋಧರ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ಹಿಂದೆ ಕರ್ನಾಟಕ ಸರ್ಕಾರ ಸೈನಿಕ ಮಂಡಳಿ ಆರಂಭಿಸಿತ್ತು. ಆದರೆ, ಈಗ ನಿಂತು ಹೋಗಿದೆ. ಮತ್ತರ ಸೈನಿಕ ಮಂಡಳಿ ಆರಂಭಿಸಬೇಕೆಂಬ ದೊಡ್ಡ ಬೇಡಿಕೆ ನಿವೃತ್ತ ಯೋಧರದ್ದಾಗಿದೆ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಅನಂತರಾಜಗೋಪಾಲ್ ಮಾತನಾಡಿ, ಸಿಆರ್ಪಿಎಫ್ ಯೋಧರು ಹಾಗೂ ನಿವೃತ್ತ ಯೋಧರು ಮೂಲಭೂತ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಸೇವಾ ಕಠಿಣತೆಯಲ್ಲೂ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ಪಿಂಚಣಿ ವ್ಯವಸ್ಥೆ ಇಲ್ಲ. ಭಾರತೀಯ ಸೇನಾ ಪಡೆಗಳಂತೆ ನಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದರು.

ಗೋಷ್ಠಿಯಲ್ಲಿ ಕರ್ನಾಟಕ‌ ಅರೆಸೇನಾ ಪಡೆಗಳ‌ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಗೌರವಾಧ್ಯಕ್ಷ ಶಿವರಾಂ ಸೇರಿದಂತೆ ಇತರೆ ನಿವೃತ್ತ ಯೋಧರು ಹಾಜರಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

7 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

9 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

11 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

16 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

19 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago