ಫೆ.15-16ರಂದು ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜನೆ

ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.

ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂರ್ಮಾಸನ ಮಾಡುವುದರಿಂದ ಹೃದಯ ಸಂಬಂಧಿ ರೋಗಗಳು, ಉಸಿರಾಟ ತೊಂದರೆ ನಿವಾರಣೆಯಾಗುತ್ತದೆ. ಸ್ಪರ್ಧೆಯಲ್ಲಿ ಸುಮಾರು 500-700 ಯೋಗಾಪಟುಗಳು ಭಾಗಿಯಾಗಲಿದ್ದಾರೆ. ಸ್ಪರ್ಧೆಯಲ್ಲಿ ಭಾಗಿಯಾಗುವವರಿಗೆ ಊಟ ಹಾಗೂ ವಸತಿ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.

ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago