ಫೆ.15-16ರಂದು ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜನೆ

ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.

ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂರ್ಮಾಸನ ಮಾಡುವುದರಿಂದ ಹೃದಯ ಸಂಬಂಧಿ ರೋಗಗಳು, ಉಸಿರಾಟ ತೊಂದರೆ ನಿವಾರಣೆಯಾಗುತ್ತದೆ. ಸ್ಪರ್ಧೆಯಲ್ಲಿ ಸುಮಾರು 500-700 ಯೋಗಾಪಟುಗಳು ಭಾಗಿಯಾಗಲಿದ್ದಾರೆ. ಸ್ಪರ್ಧೆಯಲ್ಲಿ ಭಾಗಿಯಾಗುವವರಿಗೆ ಊಟ ಹಾಗೂ ವಸತಿ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.

ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 minutes ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

2 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

2 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

4 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

5 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

9 hours ago