ಫೆ.15-16ರಂದು ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜನೆ

ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.

ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂರ್ಮಾಸನ ಮಾಡುವುದರಿಂದ ಹೃದಯ ಸಂಬಂಧಿ ರೋಗಗಳು, ಉಸಿರಾಟ ತೊಂದರೆ ನಿವಾರಣೆಯಾಗುತ್ತದೆ. ಸ್ಪರ್ಧೆಯಲ್ಲಿ ಸುಮಾರು 500-700 ಯೋಗಾಪಟುಗಳು ಭಾಗಿಯಾಗಲಿದ್ದಾರೆ. ಸ್ಪರ್ಧೆಯಲ್ಲಿ ಭಾಗಿಯಾಗುವವರಿಗೆ ಊಟ ಹಾಗೂ ವಸತಿ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.

ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

6 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

7 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

10 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

19 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago