ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.
8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.
ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…