ಶ್ರೀ ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ, ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಶ್ರೀ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರ ವತಿಯಿಂದ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಫೆ.15 ರಿಂದ 16ರವರೆಗೆ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂರ್ಮಾಸನ ತಜ್ಞ ಎಚ್.ಎಸ್ ರಾಮಕೃಷ್ಣ ತಿಳಿಸಿದರು.
8-50ವರ್ಷದ ವಯೋಮಾನದವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸ್ಪರ್ಧೆಯಲ್ಲಿ ವಿದೇಶಿ ಯೋಗಪಟುಗಳು ಸಹ ಭಾಗಿಯಾಗುವ ಸಾಧ್ಯತೆ ಇದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಯೋಗ ಉಡುಪುಗಳನ್ನು ಧರಿಸಬೇಕು. ಎರಡು ಫೋಟೋ, ಆಧಾರ್ ಕಾರ್ಡ್ ಅಥವಾ ಶಾಲಾ ಗುರುತಿನ ಚೀಟಿ, ವೈದ್ಯಕೀಯ ಪರೀಕ್ಷೆ ಪತ್ರ,ವನ್ನು ಲಗತ್ತಿಸಬೇಕು. 500ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಕೂರ್ಮಾಸನದಲ್ಲಿ ಭಾರ ಹೊತ್ತ ನಂತರ ಆಸನಗಳು, ಎರಡು ಐಚ್ಛಿಕ ಆಸನಗಳನ್ನು ಮಾಡಬೇಕು ಎಂದು ಹೇಳಿದರು.
ಈ ವೇಳೆ ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ), ಶಿವಕುಮಾರ್, ಮಂಜುನಾಥ್ (ಸಂತೆ), ವೆಂಕಟಾಚಲಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…