ಫೆ.15, 16ರಂದು ಲಕ್ಕಸಂದ್ರದ ಪುಣ್ಯಧಾಮದಲ್ಲಿ ಹಸರಂಗಿ ಅಜ್ಜಯ್ಯ ಮತ್ತು ಬಾಲಾ ತ್ರಿಪುರಸುಂದರಿ ಅಮ್ಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ

ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯ ಧಾರ್ಮಿಕ ಸಂಸ್ಥಾನ ಹಾಗೂ ಶ್ರೀ ಹಸರಂಗಿ ಅಜ್ಜಯ್ಯ ಚಾರಿಟಬಲ್‌ ಟ್ರಸ್ಟ್ ವತಿಯಿಂದ ಜಗದ್ಗುರು ಹಸರಂಗಿ ಅಜ್ಜಯ್ಯ ಮತ್ತು ಬಾಲಾ ತ್ರಿಪುರಸುಂದರಿ ಅಮ್ಮನವರ ವಿಗ್ರಹ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವನ್ನ ತಾಲೂಕಿನ ಲಕ್ಕಸಂದ್ರ ಬಳಿಯಿರುವ ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಫೆ. 15, 16‌ರಂದು ಆಯೋಜನೆ ಮಾಡಲಾಗಿದೆ ಎಂದು ಪುಣ್ಯಧಾಮದ ಪೀಠಾಧ್ಯಕ್ಷ ಗುರುದೇವ ಗುರೂಜಿ ತಿಳಿಸಿದರು.

ಈ ಕುರಿತು ಲಕ್ಕಸಂದ್ರದ ಪುಣ್ಯಧಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು 15ಕ್ಕೂ ಹೆಚ್ಚು ಶಕ್ತಿ ಕೇಂದ್ರ ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು, ನೂರಾರು ಮಂದಿ ಗಣ್ಯರು, ಸಾವಿರಾರು ಭಕ್ತಮಹಾಶಯರು ಭಾಗವಹಿಸಲಿದ್ದಾರೆ ಎಂದರು.

ಫೆ.15ರಂದು ಗುರು ಪ್ರಾರ್ಥನೆ, ಮಹಾಗಣಪತಿ ಪೂಜೆ, ಕಳಶಸ್ಥಾಪನೆ, ವಾಸ್ತು ಹೋಮ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಫೆ.16ರಂದು ಗೋಪೂಜೆ, ಪ್ರಾಣ ಪ್ರತಿಷ್ಠಾಪನೆ, ಗೋಪ್ರವೇಶ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಪ್ರಧಾನ ದೇವತೆಗಳ ಹೋಮ, ಲಲಿತಾ ಹೋಮ, ಮಹಾಪುಣ್ಯಾಹುತಿ ಹೋಮ, ಕುಂಭಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಅಜ್ಜಯ್ಯನವರನ್ನು ಹೆಚ್ಚಾಗಿ ಆರಾಧಿಸಲಾಗುತ್ತದೆ. ಎಲ್ಲಾ ಜಾತಿ, ಧರ್ಮ, ಬೇಧ-ಭಾವವಿಲ್ಲದೆ ಪೂಜೆ ಪುನಸ್ಕಾರ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 minutes ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

2 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

2 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

4 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

5 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

9 hours ago