ಫೆ.15, 16ರಂದು ಲಕ್ಕಸಂದ್ರದ ಪುಣ್ಯಧಾಮದಲ್ಲಿ ಹಸರಂಗಿ ಅಜ್ಜಯ್ಯ ಮತ್ತು ಬಾಲಾ ತ್ರಿಪುರಸುಂದರಿ ಅಮ್ಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ

ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯ ಧಾರ್ಮಿಕ ಸಂಸ್ಥಾನ ಹಾಗೂ ಶ್ರೀ ಹಸರಂಗಿ ಅಜ್ಜಯ್ಯ ಚಾರಿಟಬಲ್‌ ಟ್ರಸ್ಟ್ ವತಿಯಿಂದ ಜಗದ್ಗುರು ಹಸರಂಗಿ ಅಜ್ಜಯ್ಯ ಮತ್ತು ಬಾಲಾ ತ್ರಿಪುರಸುಂದರಿ ಅಮ್ಮನವರ ವಿಗ್ರಹ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವನ್ನ ತಾಲೂಕಿನ ಲಕ್ಕಸಂದ್ರ ಬಳಿಯಿರುವ ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಫೆ. 15, 16‌ರಂದು ಆಯೋಜನೆ ಮಾಡಲಾಗಿದೆ ಎಂದು ಪುಣ್ಯಧಾಮದ ಪೀಠಾಧ್ಯಕ್ಷ ಗುರುದೇವ ಗುರೂಜಿ ತಿಳಿಸಿದರು.

ಈ ಕುರಿತು ಲಕ್ಕಸಂದ್ರದ ಪುಣ್ಯಧಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು 15ಕ್ಕೂ ಹೆಚ್ಚು ಶಕ್ತಿ ಕೇಂದ್ರ ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು, ನೂರಾರು ಮಂದಿ ಗಣ್ಯರು, ಸಾವಿರಾರು ಭಕ್ತಮಹಾಶಯರು ಭಾಗವಹಿಸಲಿದ್ದಾರೆ ಎಂದರು.

ಫೆ.15ರಂದು ಗುರು ಪ್ರಾರ್ಥನೆ, ಮಹಾಗಣಪತಿ ಪೂಜೆ, ಕಳಶಸ್ಥಾಪನೆ, ವಾಸ್ತು ಹೋಮ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಫೆ.16ರಂದು ಗೋಪೂಜೆ, ಪ್ರಾಣ ಪ್ರತಿಷ್ಠಾಪನೆ, ಗೋಪ್ರವೇಶ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಪ್ರಧಾನ ದೇವತೆಗಳ ಹೋಮ, ಲಲಿತಾ ಹೋಮ, ಮಹಾಪುಣ್ಯಾಹುತಿ ಹೋಮ, ಕುಂಭಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಅಜ್ಜಯ್ಯನವರನ್ನು ಹೆಚ್ಚಾಗಿ ಆರಾಧಿಸಲಾಗುತ್ತದೆ. ಎಲ್ಲಾ ಜಾತಿ, ಧರ್ಮ, ಬೇಧ-ಭಾವವಿಲ್ಲದೆ ಪೂಜೆ ಪುನಸ್ಕಾರ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

50 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago