ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯ ಧಾರ್ಮಿಕ ಸಂಸ್ಥಾನ ಹಾಗೂ ಶ್ರೀ ಹಸರಂಗಿ ಅಜ್ಜಯ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಜಗದ್ಗುರು ಹಸರಂಗಿ ಅಜ್ಜಯ್ಯ ಮತ್ತು ಬಾಲಾ ತ್ರಿಪುರಸುಂದರಿ ಅಮ್ಮನವರ ವಿಗ್ರಹ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವನ್ನ ತಾಲೂಕಿನ ಲಕ್ಕಸಂದ್ರ ಬಳಿಯಿರುವ ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಫೆ. 15, 16ರಂದು ಆಯೋಜನೆ ಮಾಡಲಾಗಿದೆ ಎಂದು ಪುಣ್ಯಧಾಮದ ಪೀಠಾಧ್ಯಕ್ಷ ಗುರುದೇವ ಗುರೂಜಿ ತಿಳಿಸಿದರು.
ಈ ಕುರಿತು ಲಕ್ಕಸಂದ್ರದ ಪುಣ್ಯಧಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು 15ಕ್ಕೂ ಹೆಚ್ಚು ಶಕ್ತಿ ಕೇಂದ್ರ ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು, ನೂರಾರು ಮಂದಿ ಗಣ್ಯರು, ಸಾವಿರಾರು ಭಕ್ತಮಹಾಶಯರು ಭಾಗವಹಿಸಲಿದ್ದಾರೆ ಎಂದರು.
ಫೆ.15ರಂದು ಗುರು ಪ್ರಾರ್ಥನೆ, ಮಹಾಗಣಪತಿ ಪೂಜೆ, ಕಳಶಸ್ಥಾಪನೆ, ವಾಸ್ತು ಹೋಮ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಫೆ.16ರಂದು ಗೋಪೂಜೆ, ಪ್ರಾಣ ಪ್ರತಿಷ್ಠಾಪನೆ, ಗೋಪ್ರವೇಶ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಪ್ರಧಾನ ದೇವತೆಗಳ ಹೋಮ, ಲಲಿತಾ ಹೋಮ, ಮಹಾಪುಣ್ಯಾಹುತಿ ಹೋಮ, ಕುಂಭಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಅಜ್ಜಯ್ಯನವರನ್ನು ಹೆಚ್ಚಾಗಿ ಆರಾಧಿಸಲಾಗುತ್ತದೆ. ಎಲ್ಲಾ ಜಾತಿ, ಧರ್ಮ, ಬೇಧ-ಭಾವವಿಲ್ಲದೆ ಪೂಜೆ ಪುನಸ್ಕಾರ ಮಾಡಲಾಗುವುದು ಎಂದು ಹೇಳಿದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…