ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲಭೂತ ಸೌಕರ್ಯ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

10 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

15 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago