ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲಭೂತ ಸೌಕರ್ಯ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago