ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲಭೂತ ಸೌಕರ್ಯ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

5 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

17 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

18 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago