ಫೆ.20, 21, 22ರವರೆಗೆ “ದೊಡ್ಡಬಳ್ಳಾಪುರ ಸೀರೆ ಸಂತೆ”-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.

ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು‌‌. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..

ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.

ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago