ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.
ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..
ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.
ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…