ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.
ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..
ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.
ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…