ಫೆ.20, 21, 22ರವರೆಗೆ “ದೊಡ್ಡಬಳ್ಳಾಪುರ ಸೀರೆ ಸಂತೆ”-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.

ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು‌‌. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..

ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.

ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

8 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago