ಫೆ.25 ಹಾಗೂ‌ ಫೆ.26ರಂದು 13ನೇ ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.25 ಹಾಗೂ‌ ಫೆ.26ರಂದು ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆಯಲಿದೆ.

ಜನವರಿ 21 ಮತ್ತು 22ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನಪರಿಷತ್ತು ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಈಗಾಗಲೇ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರುಗಳಿಗೆ ಆಹ್ವಾನ ಪತ್ರಿಕೆಯನ್ನು   ಅಂಚೆಯ ಮೂಲಕ ಕಳುಹಿಸಲಾಗಿತ್ತು. ಬದಲಾಗಿರುವ ಸಮ್ಮೇಳನ ದಿನಾಂಕದಂದು ಕನ್ನಡ ಸಾಹಿತ್ಯ ಪರಿಷತ್ತು  ಸದಸ್ಯರು, ಕನ್ನಡಾಭಿಮಾನಿಗಳು ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆಯುವ   ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪಿ.ಗೋವಿಂದರಾಜು ವಿನಂತಿಸಿಕೊಂಡಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಜನಪ್ರಿಯ ವೈದ್ಯರಾದ ದೊಡ್ಡತುಮಕೂರು ಗ್ರಾಮದವರಾದ ಡಾ.ಟಿ.ಎಚ್.ಆಂಜನಪ್ಪನವರು ಸಮ್ಮೇಳನ ಅಧ್ಯಕ್ಷರಾಗಿದ್ದಾರೆ.

ಫೆ.25ರ ಭಾನುವಾರ ಸಮ್ಮೇಳನದ ಮೊದಲ ದಿನ ಧ್ವಜಾರೋಹಣ, ಸಮ್ಮೇಳನ ಅಧ್ಯಕ್ಷರ ಮೆರವಣಿಗೆ,  ಸಮ್ಮೇಳನ ಉದ್ಘಾಟನೆ, ವಿಚಾರಗೋಷ್ಠಿ, ಯುವಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಫೆ.26ರಂದು ಮಕ್ಕಳ ಗೋಷ್ಠಿ, ಮಹಿಳಾಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮಾರೋಪ ಸಮಾರಂಭ ನಡೆಯಲಿದೆ.

ಸಮ್ಮೇಳನ ಅಧ್ಯಕ್ಷರ ಪರಿಚಯ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದ ಹನುಮಂತರಾಯಪ್ಪ ಮತ್ತು ಲಕ್ಷ್ಮಿದೇವಮ್ಮ ದಂಪತಿಗಳಾದ ಮಗನಾದ ಡಾ.ಟಿ.ಎಚ್.ಆಂಜನಪ್ಪನವರು ಪ್ರಾಥಮಿಕ ಶಿಕ್ಷಣವನ್ನು ದೊಡ್ಡತುಮಕೂರು ಗ್ರಾಮದಲ್ಲಿ, ಪ್ರೌಢಶಿಕ್ಷಣವನ್ನು ದೊಡ್ಡಬಳ್ಳಾಪುರದಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಬೆಂಗಳೂರಿನಲ್ಲಿ, ವೈದ್ಯಕೀಯ ಶಿಕ್ಷಣವನ್ನು ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ಮಾಡಿದರು. ಹಲವಾರು ಪ್ರತಿಷ್ಠಿತ ಆಸ್ಪತ್ರೆ ಮತ್ತು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಾ, ಜನಸಾಮಾನ್ಯರಿಗೆ ಆರೋಗ್ಯ ಜಾಗೃತಿಯನ್ನು ಕನ್ನಡ ಭಾಷೆಯಲ್ಲಿ ಮೂಡಿಸುತ್ತಾ ಬಂದಿದ್ದಾರೆ.

ತಮ್ಮ ಹಾಸ್ಯಭರಿತ ಕನ್ನಡ ಭಾಷಣದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಕನ್ನಡ ವೈದ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಜೊತೆಗೆ ಹಲವಾರು ವೈದ್ಯಕೀಯ ಲೇಖನಗಳನ್ನು ಕನ್ನಡ ಭಾಷೆಯಲ್ಲಿ ಬರೆದಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ  ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಲಂಡನ್ ಪತ್ರಿಕಾ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಡಾ.ಬಿ.ಸಿ.ರಾಯ್ ಪ್ರಶಸ್ತಿ ಸೇರಿದಂತೆ 50 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಪ್ರಶಸ್ತಿ ಮತ್ತು ಪುರಸ್ಕಾರ ಮಾಡಿವೆ.   ದೂರದರ್ಶನ ವಾಹಿನಿಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಭಾಷೆಯಲ್ಲಿ ಆರೋಗ್ಯ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago