ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರಾಜ್ ಕುಮಾರ್ ತಿಳಿಸಿದರು.
ಮಧುರೆ ದೇವಾಲಯದ ಅನ್ನದಾಸೋಹ ಭವನದಲ್ಲಿಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಫೆ.26ರಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.
ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದರು.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…
ವಿಶ್ವ ಮಹಿಳಾ ದಿನ, ಮಾರ್ಚ್ - 8.......... ಹೆಣ್ಣಿಗೆ ಜಗತ್ತಿನಲ್ಲಿಯೇ ಅತ್ಯಂತ ಪೂಜನೀಯ ಸ್ಥಾನ ನೀಡಿರುವ ಭಾರತೀಯ ಸಂಸ್ಕೃತಿಯ ಮತ್ತೊಂದು…
ಕೇಂದ್ರ ಮಾಜಿ ಸಚಿವರು, ಹಾಲಿ ರಾಜ್ಯ ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂಬುದು ನಮ್ಮ…