ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರಾಜ್ ಕುಮಾರ್ ತಿಳಿಸಿದರು.

ಮಧುರೆ ದೇವಾಲಯದ ಅನ್ನದಾಸೋಹ ಭವನದಲ್ಲಿಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಫೆ.26ರಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.

ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago