Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

7 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago