Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago