Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago