Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

60 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago