Categories: ರಾಜ್ಯ

ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ನಡೆಸಲಾಯಿತು.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ  FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

9 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

20 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

24 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago