‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯವು ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ನಿಖರತೆ, ತಾಂತ್ರಿಕ ಸಾಮರ್ಥ್ಯ ಮತ್ತು ವೇಗದ ವರದಿ ವ್ಯವಸ್ಥೆಯಲ್ಲಿ ದೇಶದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿರುವುದು ನಿಜಕ್ಕೂ ಸಂತಸದ ವಿಷಯ ಎಂದರು.

ದೇಶದಲ್ಲಿಯೇ ಅತ್ಯಾಧುನಿಕ ಹಾಗೂ ಅತ್ಯಂತ ಪರಿಣಾಮಕಾರಿ ಫೊರೆನ್ಸಿಕ್ ತನಿಖಾ ವ್ಯವಸ್ಥೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ರಾಜ್ಯದ ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯವು ರಾಷ್ಟ್ರವೇ ಹೆಮ್ಮೆಪಡುವಂತಹ ಸಾಧನೆ ಮಾಡಿದೆ.
ಕರ್ನಾಟಕ ಎಫ್ಎಸ್ಎಲ್‌ಗೆ ರಾಷ್ಟ್ರೀಯ ಮಾನ್ಯತಾ ಮಂಡಳಿ ಮಾನ್ಯತೆ ದೊರೆತಿದ್ದು, ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಡಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಡಿಜಿಟಲ್ ಮತ್ತು ಮೊಬೈಲ್ ಫೊರೆನ್ಸಿಕ್ ವಿಭಾಗಗಳಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಲೆಕ್ಟ್ರಾನಿಕ್ಸ್‌ ಎವಿಡೆನ್ಸ್‌ ಎಕ್ಸಾಮಿನರ್ ಸ್ಥಾನಮಾನ ದೊರೆತಿರುವುದು ದೇಶದಲ್ಲೇ ಗಮನಾರ್ಹ ಸಾಧನೆಯಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಸರ್ಕಾರದ ಸಂಸ್ಥೆಗಳಿಗೆ ನೀಡಲಾಗುವ ಪ್ರತಿಷ್ಠಿತ ಡಿ.ಎಸ್.ಸಿ.ಐ ಪ್ರಶಸ್ತಿಯನ್ನು ಕರ್ನಾಟಕ ಎಫ್ಎಸ್ಎಲ್‌ ತನ್ನ ಅತ್ಯುತ್ತಮ ಡಿಜಿಟಲ್ ಫೊರೆನ್ಸಿಕ್ ಸಾಮರ್ಥ್ಯಕ್ಕಾಗಿ ಪಡೆದಿದೆ. ಇದು ರಾಜ್ಯದ ತನಿಖಾ ವ್ಯವಸ್ಥೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ, ನರೇಂದ್ರ ದಭೋಲ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣಗಳ ನಡುವಿನ ವೈಜ್ಞಾನಿಕ ಸಂಪರ್ಕವನ್ನು ಫೊರೆನ್ಸಿಕ್ ವಿಶ್ಲೇಷಣೆಯ ಮೂಲಕ ಪತ್ತೆಹಚ್ಚಿದ ಕರ್ನಾಟಕ ಎಫ್ಎಸ್ಎಲ್‌ ಕಾರ್ಯ ರಾಷ್ಟ್ರಮಟ್ಟದಲ್ಲಿ ದೊಡ್ಡ ಮೆಚ್ಚುಗೆ ಪಡೆದಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮೊದಲ ಬಾರಿಗೆ “ವೈಲ್ಡ್ ಲೈಫ್ ಫೊರೆನ್ಸಿಕ್ ಘಟಕ” ಆರಂಭಿಸಲು ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ವನ್ಯಜೀವಿ ಅಪರಾಧಗಳು ಹಾಗೂ ಅಕ್ರಮ ಸಾಗಾಟ ಪ್ರಕರಣಗಳ ತನಿಖೆಗೆ ಇದು ನೆರವಾಗಲಿದೆ ಎಂದರು.

ಎಫ್‌ಎಸ್‌ಎಲ್‌ನಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡಲಿದ್ದು, ವೈಜ್ಞಾನಿಕ ಅಧಿಕಾರಿಗಳು ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.
ಕಳೆದ ಕೆಲವು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾದರೂ, ತಂತ್ರಜ್ಞಾನ ಬಳಕೆ ಮತ್ತು ಕಾರ್ಯಕ್ಷಮತೆಯಿಂದ ಹಲವು ವಿಭಾಗಗಳಲ್ಲಿ ವರದಿ ನೀಡುವ ಅವಧಿಯನ್ನು 40 ತಿಂಗಳಿಂದ ಕೇವಲ 1 ರಿಂದ 4 ತಿಂಗಳಿಗೆ ಇಳಿಸಿರುವುದು ಇಲಾಖೆಯ ಮತ್ತೊಂದು ಗಮನಾರ್ಹ ಸಾಧನೆಯಾಗಿದೆ ಎಂದು ಹೇಳಿದರು.

ಅಪರಾಧ ತನಿಖೆಯಲ್ಲಿ ನಿಖರತೆ, ವೇಗ ಮತ್ತು ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರ ಫೊರೆನ್ಸಿಕ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ದೇಶದಲ್ಲೇ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago