ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ


ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 31 ದಿನಗಳ ಉಚಿತ ತರಬೇತಿಯು ಮಾರ್ಚ್ 09 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ: ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…

14 hours ago

ರೈತರಿಗೆ ಗುಡ್ ನ್ಯೂಸ್: ‘ಪಿ’ ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯ

ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…

15 hours ago

ಭಾರತದ ರಿಪೋರ್ಟ್ ಕಾರ್ಡ್……..

ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ......‌.‌‌........…

1 day ago

ಯುವ ಕಾಂಗ್ರೆಸ್ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…

2 days ago

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ  ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು,…

2 days ago

ಡಯಾಲಿಸಿಸ್ ಅಂತಿಮವಲ್ಲ: ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಬೆಂಗಳೂರು , ವೈಟ್‌ಫೀಲ್ದ್‌ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್‌, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…

2 days ago