ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್ಎಲ್ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
View Comments
Photography & videography
I am interested in photography & videography