ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಸ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿಯು 25 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ 18 ರಿಂದ 45 ರ್ಷಗ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು DSLR Camara ಕಡ್ಡಾಯವಾಗಿ ಹೊಂದಿರತಕ್ಕದ್ದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…