ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎನ್.ಭುಜಂಗರಾವ್ ಬಂಧಿತರ ಅಧಿಕಾರಿಗಳು.
ಬಂಧಿತ ಆರೋಪಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇದ್ದರು ಎನ್ನಲಾಗಿದೆ.
ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್ಐಬಿ) ಡಿಎಸ್ಪಿ ಆಗಿದ್ದ ಡಿ.ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಡಿಎಸ್ಪಿ ಡಿ.ಪ್ರಣೀತ್ ರಾವ್ ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…