ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎನ್.ಭುಜಂಗರಾವ್ ಬಂಧಿತರ ಅಧಿಕಾರಿಗಳು.
ಬಂಧಿತ ಆರೋಪಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇದ್ದರು ಎನ್ನಲಾಗಿದೆ.
ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್ಐಬಿ) ಡಿಎಸ್ಪಿ ಆಗಿದ್ದ ಡಿ.ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಡಿಎಸ್ಪಿ ಡಿ.ಪ್ರಣೀತ್ ರಾವ್ ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…