ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎನ್.ಭುಜಂಗರಾವ್ ಬಂಧಿತರ ಅಧಿಕಾರಿಗಳು.
ಬಂಧಿತ ಆರೋಪಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇದ್ದರು ಎನ್ನಲಾಗಿದೆ.
ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್ಐಬಿ) ಡಿಎಸ್ಪಿ ಆಗಿದ್ದ ಡಿ.ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಡಿಎಸ್ಪಿ ಡಿ.ಪ್ರಣೀತ್ ರಾವ್ ಅವರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…