ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ- ಪ್ರಾಂಶುಪಾಲ ಮಂಜಯ್ಯ

ಮಾದಕ ವಸ್ತುಗಳ ವ್ಯಸನ ಮಾನಸಿಕ ಹಾಗೂ ದೈಹಿಕ ಕಾಯಿಲೆಯಾಗಿದ್ದು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜಯ್ಯ ಅವರು ತಿಳಿಸಿದರು.

ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಮದ್ಯ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಜಾಥಾ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಮೇಲೆ ಮಾನಸಿಕವಾಗಿ, ದೈಹಿಕವಾಗಿ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಯುವಕರು ಇಂಥ ಚಟಗಳಿಂದ ದೂರವಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಅರೋಗ್ಯ ರಕ್ಷಣಾಧಿಕಾರಿ ಜಯಲಕ್ಷ್ಮಿ ಅವರು ಮಾತನಾಡಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಯುವಜನತೆಯು ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ,ಉದ್ಯೋಗದಲ್ಲಿ ತೊಂದರೆ, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ದುಶ್ಚಟಗಳಿಂದ ದೂರವಿರಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಕುಮಾರ್ ಡಿ, ದೈಹಿಕ ಶಿಕ್ಷಕರಾದ ರವಿ ಸೇರಿದಂತೆ ಅಧಿಕಾರಿಗಳು ಮತ್ತು ಕಾಲೇಜು ಉಪನ್ಯಾಸಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

6 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

6 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

7 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

10 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago