ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ.
ರೈತರಲ್ಲಿ ನೋಂದಣಿ ಮಾಡಿಸಿಕೊಳ್ಳುವ ಕುರಿತು ಅರಿವು ಮೂಡಿಸುತ್ತಿದ್ದರೂ ಇನ್ನು ಹಲವು ತಾಕುಗಳು ಸೇರ್ಪಡೆಗೆ ಬಾಕಿ ಉಳಿದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ತಾಕುಗಳನ್ನು ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಡಿ.26ರಿಂದ ಡಿ.30ರವರೆಗೆ ಅಭಿಯಾನ ಕೈಗೊಳ್ಳಲಾಗುತ್ತಿದೆ.
ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಹೋಬಳಿ ವ್ಯಾಪ್ತಿಗೆ ನಿಯೋಜಿಸಿದ್ದು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ರೈತರು ತಮ್ಮ ತಾಕುಗಳನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು.
ಅಧಿಕಾರಿಗಳು ಅಭಿಯಾನದ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಅಗತ್ಯ ದಾಖಲೆಗಳನ್ನು (ಪಹಣಿ ಪತ್ರಿಕೆ, ಆಧಾರ್ ಸಂಖ್ಯೆ, ಬ್ಯಾಂಕ್ ಪಾಸು ಪುಸ್ತಕ, ಹಾಗೂ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತಿಗಳನ್ನು ಒದಗಿಸಿ ಸಹಕರಿಸಬೇಕು.
ಅಲ್ಲದೇ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಹಾಗೂ ಬಾಕಿಯಿರುವ ತಾಕುಗಳನ್ನು ಸೇರ್ಪಡೆಗೊಳಿಸುವ ಕುರಿತು ರೈತರ ಕರೆಗಳಿಗೆ ಮಾಹಿತಿ ನೀಡುವ ಸಲುವಾಗಿ ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ಬೆಂಗಳೂರು ಜಿಲ್ಲೆ ಇಲ್ಲಿ ರೈತರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.
ರೈತರು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ಮಾಹಿತಿಗಾಗಿ ಪೂರ್ವಾಹ್ನ 8.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕೇಂದ್ರದ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26676143 ರೈತರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…