ಫ್ರೂಟ್ಸ್ ತಂತ್ರಾಂಶದಲ್ಲಿ ತಾಕುಗಳ ಕಡ್ಡಾಯ ಸೇರ್ಪಡೆ- ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಿರಿ- ಜಿಲ್ಲಾಧಿಕಾರಿ ಕರೆ

ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ.

ರೈತರಲ್ಲಿ ನೋಂದಣಿ ಮಾಡಿಸಿಕೊಳ್ಳುವ ಕುರಿತು ಅರಿವು ಮೂಡಿಸುತ್ತಿದ್ದರೂ ಇನ್ನು ಹಲವು ತಾಕುಗಳು ಸೇರ್ಪಡೆಗೆ ಬಾಕಿ ಉಳಿದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ತಾಕುಗಳನ್ನು ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಡಿ.26ರಿಂದ ಡಿ.30ರವರೆಗೆ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಹೋಬಳಿ ವ್ಯಾಪ್ತಿಗೆ ನಿಯೋಜಿಸಿದ್ದು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ರೈತರು ತಮ್ಮ ತಾಕುಗಳನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು.

ಅಧಿಕಾರಿಗಳು ಅಭಿಯಾನದ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಅಗತ್ಯ ದಾಖಲೆಗಳನ್ನು (ಪಹಣಿ ಪತ್ರಿಕೆ, ಆಧಾ‌ರ್ ಸಂಖ್ಯೆ, ಬ್ಯಾಂಕ್ ಪಾಸು ಪುಸ್ತಕ, ಹಾಗೂ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತಿಗಳನ್ನು ಒದಗಿಸಿ ಸಹಕರಿಸಬೇಕು.

ಅಲ್ಲದೇ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಹಾಗೂ ಬಾಕಿಯಿರುವ ತಾಕುಗಳನ್ನು ಸೇರ್ಪಡೆಗೊಳಿಸುವ ಕುರಿತು ರೈತರ ಕರೆಗಳಿಗೆ ಮಾಹಿತಿ ನೀಡುವ ಸಲುವಾಗಿ ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ಬೆಂಗಳೂರು ಜಿಲ್ಲೆ ಇಲ್ಲಿ ರೈತರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ರೈತರು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ಮಾಹಿತಿಗಾಗಿ ಪೂರ್ವಾಹ್ನ 8.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕೇಂದ್ರದ ಮೂಲಕ ಮಾಹಿತಿ ಪಡೆಯಬಹುದಾಗಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26676143 ರೈತರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

8 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

21 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago