ಫ್ರೂಟ್ಸ್ ತಂತ್ರಾಂಶದಲ್ಲಿ ತಾಕುಗಳ ಕಡ್ಡಾಯ ಸೇರ್ಪಡೆ- ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಿರಿ- ಜಿಲ್ಲಾಧಿಕಾರಿ ಕರೆ

ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ.

ರೈತರಲ್ಲಿ ನೋಂದಣಿ ಮಾಡಿಸಿಕೊಳ್ಳುವ ಕುರಿತು ಅರಿವು ಮೂಡಿಸುತ್ತಿದ್ದರೂ ಇನ್ನು ಹಲವು ತಾಕುಗಳು ಸೇರ್ಪಡೆಗೆ ಬಾಕಿ ಉಳಿದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ತಾಕುಗಳನ್ನು ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಡಿ.26ರಿಂದ ಡಿ.30ರವರೆಗೆ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಹೋಬಳಿ ವ್ಯಾಪ್ತಿಗೆ ನಿಯೋಜಿಸಿದ್ದು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ರೈತರು ತಮ್ಮ ತಾಕುಗಳನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು.

ಅಧಿಕಾರಿಗಳು ಅಭಿಯಾನದ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಅಗತ್ಯ ದಾಖಲೆಗಳನ್ನು (ಪಹಣಿ ಪತ್ರಿಕೆ, ಆಧಾ‌ರ್ ಸಂಖ್ಯೆ, ಬ್ಯಾಂಕ್ ಪಾಸು ಪುಸ್ತಕ, ಹಾಗೂ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತಿಗಳನ್ನು ಒದಗಿಸಿ ಸಹಕರಿಸಬೇಕು.

ಅಲ್ಲದೇ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಹಾಗೂ ಬಾಕಿಯಿರುವ ತಾಕುಗಳನ್ನು ಸೇರ್ಪಡೆಗೊಳಿಸುವ ಕುರಿತು ರೈತರ ಕರೆಗಳಿಗೆ ಮಾಹಿತಿ ನೀಡುವ ಸಲುವಾಗಿ ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ಬೆಂಗಳೂರು ಜಿಲ್ಲೆ ಇಲ್ಲಿ ರೈತರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ರೈತರು ಅಭಿಯಾನದ ಅವಧಿಯಲ್ಲಿ ಹೆಚ್ಚಿನ ಮಾಹಿತಿಗಾಗಿ ಪೂರ್ವಾಹ್ನ 8.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕೇಂದ್ರದ ಮೂಲಕ ಮಾಹಿತಿ ಪಡೆಯಬಹುದಾಗಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:080-26676143 ರೈತರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago